ಆತ್ಮದ ಮಾತುಗಳು

Share Button

Ku.Sa.Madhusudan

ಈಗ ಹಗಲನ್ನು

ಇರುಳನ್ನೂ ಕಳೆದುಕೊಂಡೆ

ಹೊಂಬಣ್ಣದ ಸಂಜೆಯೊಳಗೆ ತುಂಗೆಯ ಮರಳುರಾಶಿಯಲ್ಲಿ ಮೂಡಿದ

ನಿನ್ನ ಹೆಜ್ಜೆಗಳ ಅನುಸರಿಸುವ ಭ್ರಮೆಯೊಳಗೆ ನನ್ನ ಕಾಲುಗಳು

ಹೂತುಹೋದದ್ದು ನನಗೆ ಗೊತ್ತಾಗಲೇ ಇಲ್ಲ

ಮೋಡಗಳ ಮರೆಯಿಂದ ಇಣುಕುತ್ತಿದ್ದ ಸೂರ್ಯ

ನಿರಂತರವಲ್ಲವೆಂಬ ಅರಿವು ಮೂಡುವಷ್ಟರಲ್ಲಿ

ಕಳೆದುಕೊಂಡಿದ್ದೆ ನಿನ್ನನೂ

.

ಕವಿತೆಯ ಪ್ರತಿಸಾಲನ್ನೂ ನೀನು ಆಕ್ರಮಿಸುವಾಗ

ಪ್ರತಿ ಶಬುದವನ್ನೂ ಜತನದಿಂದ ಕಂಠಪಾಠ ಮಾಡಿಟ್ಟುಕೊಂಡಿದ್ದೆ ನಿನ್ನೆದುರು ಹಾಡಲು

ಆಗುಂಬೆಯ ಸೂರ್ಯಾಸ್ತದಲ್ಲಿ ಮುಳುಗಿದ್ದವನು ಮುಸುಕಿದ ಕತ್ತಲ ಕಂಡು

ಹಿಂತಿರುಗಿ ನೋಡುವಷ್ಟರಲ್ಲಿ ನೀನಾಗಲೇ ವಿದಾಯ ಹೇಳಿಯಾಗಿತ್ತು

ಯಾಕೆ ಹೋದೆ

ಎಲ್ಲಿ ಹೋದೆ

ಯಾರಿರುವರು ಜೊತೆಗೆ

.

ಕೇಳಬಾರದ ಕೇಳಬಾರದ ಪ್ರಶ್ನೆಗಳಿಗೆ ಉತ್ತರಕ್ಕಾಗಿ

ಅಲೆಯುತ್ತಿರುತ್ತಿದ್ದೇನೆ  ಈಗ

ತುಂಗೆಯಿಂದ ದೂರ

ಬಯಲು ಸೀಮೆಯ ಕುರುಚಲು ಬಯಲುಗಳಲ್ಲಿ

ಆತ್ಮದ ಮಾತಾಡಬೇಡವೆಂದು ಹೇಳಿದ ನಿನ್ನ ಮಾತುಗಳಷ್ಟೇ

ರಿಂಗಣಿಸುತ್ತವೆ ನನ್ನ ಕಿವಿಗಳೊಳಗೆ!

 

sunset

 – ಕು.ಸ.ಮಧುಸೂದನನಾಯರ್ , ರಂಗೇನಹಳ್ಳಿ

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Follow

Get every new post on this blog delivered to your Inbox.

Join other followers: