ಪಾಠ

Share Button

ಕಣ್ಣಿಗೆ ಕಾಣದ ಜಂತವೊಂದು
ಜಗಕ್ಕೆ ಹೊಸ ಪಾಠವ ಕಲಿಸಿದೆ
ಹೆಣ್ಣು ಹೊನ್ನು ಮಣ್ಣು ತನ್ನದೆಂದು
ಮರೆದವರ ದರ್ಪವನು ಅಡಗಿಸಿದೆ.

ಜನನಿ ಜನ್ಮಭೂಮಿ ಮರೆತು ಹೋದ
ಜನರನು ಮರಳಿ ಗೂಡಿಗೆ ಕರೆಸಿದೆ
ಜನ್ಮದಾತರ ಕಣ್ಣೀರು ಹಾಕಿಸ ಮೆರೆದ
ಜನರಿಗೆ ಹೆತ್ತವರ ಬೆಲೆಯನು ತಿಳಿಸಿದೆ.

ನೆಲ, ಜಲಚರ ಜೀವಿಗಳ ತಿಂದು ತೇಗಿದ
ನರರಾಕ್ಷಸರಿಗೆ ಜೀವ ಭಯ ಮೂಡಿಸಿದೆ
ಕಾಣದ ಕಡಲಿಗೆ ಹಂಬಲಿಸಿದವರಿಗೆ
ಉಪ್ಪು ನೀರು ಕುಡಿಸಿ ಬುದ್ಧಿ ಹೇಳಿದೆ.

ಮಂದಿರ ಚರ್ಚ್ ಮಸೀದಿಯ ದೇವ್ರುಗಳ
ಮರೆಸಿ ವೈದ್ಯರನ್ನೇ ದೇವ್ರೆಂದು ಸಾರಿದೆ
ಅರಮನೆಯಲ್ಲಿ ಸುಖದಿ ಮಲಗಿದ್ದವರಿಗೆ
ನೆರೆಮನೆಯವರ ನೆನಪು ಮಾಡಿದೆ.

ಪ್ರಕೃತಿಯನು ವಿಕೃತಗೊಳಿಸಿದವರಿಗೆ
ಪ್ರಕೃತಿಯ ಮಹತ್ವವನ್ನು ತಿಳಿಸಿದೆ
ಬಲಾಢ್ಯರೆಂದು ಕೊಬ್ಬಿದ ರಾಷ್ಟ್ರಗಳಿಗೆ
ಬಲವಾದ ಪೆಟ್ಟನ್ನು ಕೊಡಲು ಬಂದಿದೆ.

ಜಾತಿ ಮತ ಧರ್ಮಗಳ ಪೊರೆಯಿಂದ
ಕುರುಡರಾದವರಿಗೆ ಬೆಳಕು ನೀಡಿದೆ
ಯುದ್ಧ ಭೀಭತ್ಸ ಉತ್ಸಾಹಿಗಳೆದರು
ಮುದ್ದು ಗುಂಡಿಲ್ಲದೆ ಯುದ್ಧವ ಗೆದ್ದಿದೆ.

-ಶಿವಮೂರ್ತಿ.ಹೆಚ್., ದಾವಣಗೆರೆ.

  

3 Responses

  1. ಶಿವಮೂರ್ತಿ ಹೆಚ್ says:

    ನಮ್ಮ ಕವನವನ್ನು ಪ್ರಕಟಿಸಿ ಪ್ರೋತ್ಸಾಹಿಸಿದ ಸಂಪಾದಕರಿಗೆ ಹೃತ್ಪೂರ್ವಕ ಕೃತಜ್ಞತೆಗಳು

  2. Archana says:

    Nice

  3. ಶಂಕರಿ ಶರ್ಮ says:

    ಚಂದದ ಕವನ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Follow

Get every new post on this blog delivered to your Inbox.

Join other followers: